ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಪಿಡಿಒ ಅಮಾನತಿಗೆ ಕೆಎಸ್ಎಟಿ ತಡೆ, ಸರ್ಕಾರಕ್ಕೆ ಮತ್ತೊಂದು ಮುಖಭಂಗ
ಪತ ಸಂಚಲನ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಪಿಡಿಒ ಅಮಾನತಿಗೆ ಕೆಎಸ್ಎಟಿ ತಡೆ, ಸರ್ಕಾರಕ್ಕೆ ಮತ್ತೊಂದು ಮುಖಭಂಗ ರಾಯಚೂರು ಜಿಲ್ಲೆಯ ಲಿಂಗಸುಗೂರಿನಲ್ಲಿ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಪಥಸಂಚಲನದಲ್ಲಿ ಪಾಲ್ಗೊಂಡಿದ್ದ ಕಾರಣಕ್ಕೆ ಅಮಾನತುಗೊಂಡಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಪ್ರವೀಣ್ ಕುಮಾರ್ ಅವರ ಅಮಾನತು ಆದೇಶಕ್ಕೆ ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿ (ಕೆಎಸ್ಎಟಿ) ತಡೆಯಾಜ್ಞೆ ನೀಡಿದೆ. ರಾಜಕೀಯ ಒತ್ತಡದಿಂದಾಗಿ ಈ ಅಮಾನತು ಆದೇಶವನ್ನು ಏಕಪಕ್ಷೀಯವಾಗಿ ಹೊರಡಿಸಲಾಗಿತ್ತು ಎಂದು ಆರೋಪಿಸಲಾಗಿದ್ದು, ಕೆಎಸ್ಎಟಿ ತೀರ್ಪು ರಾಜ್ಯ ಸರ್ಕಾರಕ್ಕೆ ಮುಖಭಂಗ ಉಂಟುಮಾಡಿದೆ. ರಾಷ್ಟ್ರಕ್ಕಾಗಿ ಕಾಣಿಕೆ ರಾಯಚೂರು: ಲಿಂಗಸುಗೂರಿನಲ್ಲಿ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕಾಗಿ ಅಮಾನತುಗೊಂಡಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಪ್ರವೀಣ್ ಕುಮಾರ್ ಅವರ ಅಮಾನತು ಆದೇಶಕ್ಕೆ ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿ (ಕೆಎಸ್ಎಟಿ) ಗುರುವಾರ ತಡೆಯಾಜ್ಞೆ ನೀಡಿದೆ. ರಾಜಕೀಯ ಒತ್ತಡದಿಂದಾಗಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರವೀಣ್ ಕುಮಾರ್ ಅವರನ್ನು ಏಕಪಕ್ಷೀಯವಾಗಿ ಅಮಾನತು ಮಾಡಲಾಗಿದೆ ಎಂದು ಆರೋಪಿಸಿ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರ ಕಚೇರಿಯ ಕಾನೂನು ತಂಡವು ಕರ್ನಾಟಕ ರಾಜ್ಯ ಆಡಳಿ...